ಮೈಸೂರು- ಸಾಂಸ್ಕೃತಿಕ ನಗರಿ ಮೈಸೂರಿನ ಎನ್.ಆರ್. ಸಂಚಾರ ವಿಭಾಗದ ಪಿಎಸ್ಐ ಅಶ್ವಿನಿ ಅನಂತಪುರ ಅವರನ್ನು ಎಫ್ ಡಿಐ ಪರೀಕ್ಷೆ ಹಗರಣದಲ್ಲಿ ಸಸ್ಪೆಂಡ್ ಮಾಡಲಾಗಿದೆ.
ಕೆಪಿಎಸ್ಸಿ ವತಿಯಿಂದ ನಡೆದಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ ಡೀಲ್ ಆರೋಪ
ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ದಾಖಲೆಗಳ ಸಮೇತ ಆರೋಪ ಮಾಡಿದ ಹಿನ್ನೆಲೆ
ಅಶ್ವಿನಿ ಅನಂತಪುರ ಅವರನ್ನು ಅಮಾನತು ಮಾಡಿ ಆದೇಶಿಸಿದ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ
ಬಾಗಲಕೋಟೆಯ ಸಂಗಮೇಶ್ ಝಳಕಿ ಜತೆ ಹಣದ ವ್ಯವಹಾರದ ಬಗ್ಗೆ ಸಂಭಾಷಣೆ ನಡೆಸಿರುವ ಆಡಿಯೋ ಬಯಲು
ವಾಟ್ಸಪ್ ಚಾಟಿಂಗ್, ಬ್ಯಾಂಕ್ ವಿವರಗಳನ್ನು ಬಹಿರಂಗಗೊಳಿಸಿದ್ದ ಲಕ್ಷ್ಮಣ್
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್ ಆಯುಕ್ತರು
ವಿಚಾರಣೆ ಬಾಕಿ ಇರಿಸಿ, ತಕ್ಷಣ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ
Comments