ಮೈಸೂರು- ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದವರು ಮೈಸೂರಿನಲ್ಲಿ ಇಂದು ವಿನೂತನ ಪ್ರತಿಭಟನೆ ನಡೆಸಿದರು.
ಮೈಸೂರಿನ ಗನ್ ಹೌಸ್ ಬಳಿ ನಡೆದ ಪ್ರತಿಭಟನೆಗೆ ಐಕ್ಯ ಹೋರಾಟಗಾರರು ಕೂಡ ಸಾಥ್ ನೀಡಿದ್ರು.
ಜನ ವಿರೋಧಿ ಹಾಗೂ ರೈತ ವಿರೋಧಿಯಾದ ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಾಸು ಪಡೆಯಬೇಕು. ಇಲ್ಲವೆಂದರೆ ದೆಹಲಿಯಲ್ಲಿ ರಾಕೇಶ್ ಟಿಕಾಯತ್ ನಡೆಸುತ್ತಿರುವ ಹೋರಾಟವಲ್ಲದೆ ದೇಶದ ಎಲ್ಲೆಡೆ ತೀವ್ರ ರೀತಿಯ ಹೋರಾಟ ರೂಪಿಸಬೇಕಾಗುತ್ತದೆ ಎಂದು ರೈತರು ಎಚ್ಚರಿಕೆ ನೀಡಿದ್ರು.
ಈ ವೇಳೆ ಕೇಂದ್ರದ ಕೃಷಿ ವಿನಾಶ ಕಾಯ್ದೆಗಳ ಶವಯಾತ್ರೆ ನಡೆಸಿ ಪ್ರತಿಕೃತಿಯನ್ನು ದಹಿಸಿ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
Comments