Uncategorized

ಮುಖ್ಯಮಂತ್ರಿ ಯಡಿಯೂರಪ್ಪಗೆ ಮತ್ತೆ ಕೊರೊನಾ ಪಾಸಿಟಿವ್- ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ತಕ್ಷಣವೇ ಶಿಫ್ಟ್

0

ಬೆಂಗಳೂರು- ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮತ್ತೆ ಕೊರೊನಾ ಪಾಸಿಟವ್ ಆಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೆ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜ್ವರ, ಮೈ ಕೈ ನೋವು ಸೇರಿದಂತೆ ಅನಾರೋಗ್ಯದ ಲಕ್ಷಣಗಳು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರ ಮನೆ ಬಳಿ ಇರುವ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇವತ್ತು ಬೆಳಿಗ್ಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಕೊರೊನಾ ಸೋಂಕು ತಗುಲಿರುವ ರಿಪೋರ್ಟ್ ಬಂದಿತು. ಈ ವೇಳೆ ಬಿಎಸ್ ವೈಗೆ ಚಿಕಿತ್ಸೆ ನೀಡುತ್ತಿದ್ದ ಡಾ.ಗುರುದತ್ ಅವರು ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಡಿಸಿದರು.
ತಮ್ಮ ಫ್ಯಾಮಿಲಿ ಡಾಕ್ಟರ್ ಇರುವ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲು ಕುಟುಂಬಸ್ಥರು ತೀರ್ಮಾನ ಕೈಗೊಂಡಿದ್ದಾರೆ. ಯಡಿಯೂರಪ್ಪ ಅವರಿಗೆ ಸಿಟಿ ಸ್ಕ್ಯಾನಿಂಗ್ ಸೇರಿದಂತೆ ಹಲವು ಟೆಸ್ಟ್ ಗಳನ್ನು ಮಾಡಲಾಗಿದ್ದು, ಎಲ್ಲಾ ನಾರ್ಮಲ್ ಆಗಿದೆ.
ಕಳೆದ ಕೆಲವು ತಿಂಗಳ ಹಿಂದೆ ಯಡಿಯೂರಪ್ಪ ಅವರಿಗೆ ಕೊರೊನಾ ತಗುಲಿ ಇದೇ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಎರಡನೆ ಬಾರಿಗೆ ಕೊರೊನಾ ಸೋಂಕು ತಗುಲಿದೆ.
ಈಗ ಯಡಿಯೂರಪ್ಪ ಅವರ ಜೊತೆ ಸಂಪರ್ಕದಲ್ಲಿದ್ದ ಎಲ್ಲರಿಗೂ ಕೊರೊನಾ ಟೆಸ್ಟ್ ಮಾಡಬೇಕಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು ನನ್ನ ಜೊತೆ ಸಂಪರ್ಕದಲ್ಲಿರುವ ಎಲ್ಲರೂ ಕೂಡ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು. ಜೊತೆಗೆ ಕ್ವಾರೆಂಟೈನ್ ಆಗಬೇಕು ಎಂದು ಸೂಚಿಸಿದ್ದಾರೆ. 

siteadmin

ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಗೆ ದಾಖಲು- ತಜ್ಞ ವೈದ್ಯರಿಂದ BSY ಗೆ ಚಿಕಿತ್ಸೆ

Previous article

ಕನ್ನಡ ಬಿಗ್ ಬಾಸ್ ಸೀಸನ್ 8 ಕ್ಕೆ ಮೆಗಾ ಟ್ವಿಸ್ಟ್- ಕಿಚ್ಚ ಸುದೀಪ್ ಬದಲು ಯಾರು ನಿರೂಪಣೆ ಮಾಡುತ್ತಾರೆ…?

Next article

You may also like

Comments

Leave a reply

Your email address will not be published. Required fields are marked *