HealthTop News

ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಗೆ ದಾಖಲು- ತಜ್ಞ ವೈದ್ಯರಿಂದ BSY ಗೆ ಚಿಕಿತ್ಸೆ

0

ಬೆಂಗಳೂರು- ಉತ್ತರ ಕರ್ನಾಟಕದ ಚುನಾವಣೆಯಲ್ಲಿ ಎಡಬಿಡದೆ ಪ್ರಚಾರ ನಡೆಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಯಡಿಯೂರಪ್ಪ ಅವರನ್ನು ಸದ್ಯ ಅವರ ಮನೆ ಬಳಿ ಇರುವ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಈಗ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ.
ಉತ್ತರ ಕರ್ನಾಟಕದ ಬೆಳಗಾವಿ, ಮಸ್ಕಿ, ಬಸವ ಕಲ್ಯಾಣ ಕ್ಷೇತ್ರಗಳಲ್ಲಿ ಯಡಿಯೂರಪ್ಪ ಅವರು ಹಗಲು ರಾತ್ರಿ ಎನ್ನದೆ ಪ್ರಚಾರ ಮಾಡಿದ್ದರು. ಇದರಿಂದ ಸಿಎಂ ತುಂಬಾ ಬಳಲಿದ್ದರು.
ಕಳೆದ ಎರಡು ದಿನದ ಹಿಂದೆ ಯಡಿಯೂರಪ್ಪ ಅವರನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಅದರಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿತ್ತು. ಈಗ ಮಣಿಪಾಲ್ ಆಸ್ಪತ್ರೆಯಲ್ಲಿ ತಜ್ಞ ವೈದ್ಯರು ಯಡಿಯೂರಪ್ಪ ಅವರಿಗೆ ಚಿಕಿತ್ಸೆ ನೀಡಲಿದ್ದಾರೆ.

siteadmin

15 ದಿನಗಳ ಕಾಲ ದೇವಸ್ಥಾನಗಳು ಬಂದ್- ದರ್ಶನ ಭಾಗ್ಯ ಕರುಣಿಸದ ದೇವರುಗಳು

Previous article

ಮುಖ್ಯಮಂತ್ರಿ ಯಡಿಯೂರಪ್ಪಗೆ ಮತ್ತೆ ಕೊರೊನಾ ಪಾಸಿಟಿವ್- ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ತಕ್ಷಣವೇ ಶಿಫ್ಟ್

Next article

You may also like

Comments

Leave a reply

Your email address will not be published. Required fields are marked *

More in Health