ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಪತ್ನಿ ತ್ರಿಷಿಕಾ ಒಡೆಯರ್ ಅವರೊಂದಿಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಸ್ವಚ್ಚತಾ ಕಾರ್ಯ ಕೈಗೊಂಡರು.
ಮೋದಿ ರ್ಯಾಲಿ ಸಂದರ್ಭದಲ್ಲಿ ಮೈದಾನದಲ್ಲಿ ಕಸ ಬಿಸಾಡಲಾಗಿತ್ತು.
ಈ ಹಿನ್ನೆಲೆ ಇಂದು ಬೆಳಿಗ್ಗೆ ಹರಡಿದ್ದ ಕಸವನ್ನು ಯದುವೀರ್ ಮತ್ತು ತ್ರಿಷಿಕಾ ಸಿಬ್ಬಂದಿಗಳ ಜೊತೆ ಸೇರಿ ಸ್ವಚ್ಚಗೊಳಿಸಿದರು
ಇಂದು ಸ್ವಚ್ಚಟಾ ಕಾರ್ಯದಲ್ಲಿ ಭಾಗಿಯಾದ ಕಾರ್ಮಿಕರಿಗೆ ಯದುವೀರ್ ಅವರು ಕೃತಜ್ಞತೆ ಸಲ್ಲಿಸಿದರು.ಹಾಗೆ ಕಸವನ್ನು ಆದಷ್ಟು ಬೇಗ ಮೈದಾನದಿಂದ ತೆರವುಗೊಳಿಸುವಂತೆ ಮನವಿ ಮಾಡಿದರು.
ಈ ವೇಳೆ ಮಾತನಾಡಿದ ಯದುವೀರ್, ‘ನಗರವು ಯಾವಾಗಲೂ ಸ್ವಚ್ಛವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ, ಮೋದಿಜಿಯವರ ಕಾರ್ಯಕ್ರಮದ ನಂತರ ಮೈದಾನವನ್ನು ಸ್ವಚ್ಛವಾಗಿರಿಸಿಕೊಳ್ಳುವುದು ನನ್ನ ಕರ್ತವ್ಯವಾಗಿದೆ ಮತ್ತು ನಗರವನ್ನು ಸ್ವಚ್ಛವಾಗಿಡುವುದು ನಮ್ಮ ಪ್ರಧಾನಮಂತ್ರಿ ಉಪಕ್ರಮದ ಸ್ವಚ್ ಭಾರತ್ ಅಭಿಯಾನಕ್ಕೆ ಅನುಗುಣವಾಗಿದೆ, ಎ
ಮೈಸೂರು ನಗರದ ಸ್ವಚ್ಟತೆಗೆ ನನ್ನ ಮೊದಲ ಆದ್ಯತೆ’ ಇದು ಇನ್ನೂ ಮುಂದೆಯೂ ಮುಂದುವರೆಯುತ್ತದೆ ಎಂದರು.
ಯದುವೀರ್ ಸ್ವಚ್ಛತಾ ಕಾರ್ಯಕ್ಕೆ ಮೈದಾನಕ್ಕೆ ಬಂದಿದ್ದನ್ನು ನೋಡಿ ಬೆಳಗು ಜಾವದ ವಾಯು ವಿಹಾರಕ್ಕೆ ಬಂದ ಸಾರ್ವಜನಿಕರು ಆಶ್ಚರ್ಯಚಕಿತರಾದರು ಮತ್ತು ತಕ್ಷಣವೇ ಮೈದಾನವನ್ನು ಸ್ವಚ್ಛಗೊಳಿಸುವುದನ್ನು ನೋಡಿ ಸಂತೋಷಪಟ್ಟರು.
Comments