ಮೈಸೂರು- ಕೇರಳದ ವೈನಾಡು ಚುನಾವಣಾ ಪ್ರಚಾರಕ್ಕೆ ಬಂದಿದ್ದ ರಾಹುಲ್ ಗಾಂಧಿ ಹಾಗೂ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಇಂದು ಮೈಸೂರಿಗೆ ಆಗಮಿಸಿದ್ದರು.
ವಿಮಾನ ನಿಲ್ದಾಣದ ವಿಐಪಿ ಕೊಠಡಿಯಲ್ಲಿ ಇಬ್ಬರು ಮೈಸೂರಿನ ಮೈಲಾರಿ ಹೋಟೆಲ್ ದೋಸೆ ಸವಿದರು.
ಸುಮಾರು ಅರ್ಧ ಗಂಟೆಗಳ ಕಾಲ ಮೈಸೂರು ಹಾಗೂ ಕೊಡಗು ಲೋಕಸಭಾ ಕ್ಷೇತ್ರ ಮತ್ತು ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಚುನಾವಣೆ ಬಗ್ಗೆ ವರದಿ ಪಡೆದರು.
ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದೂರವಾಣಿ ಮೂಲಕ ಅಲ್ಲಿಂದಲೇ ಸಿದ್ದರಾಮಯ್ಯನವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದರು.
ಖಾಸಗಿ ಭೇಟಿಯಾದ ಹಿನ್ನೆಲೆಯಲ್ಲಿ ಮೈಸೂರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಯಾವುದೇ ಮಾಹಿತಿ ಇರಲಿಲ್ಲ.
Comments