ಸಚಿವರು ದೇಶದ್ರೋಹಿಗಳ ಪರ ನಿಂತಿರುವುದು ದುರ್ದೈವ: ಬಸವರಾಜ ಬೊಮ್ಮಾಯಿ*
*ದೇಶದ್ರೋಹಿಗಳನ್ನು ಸಮರ್ಥಿಸಿಕೊಂಡವರು ಕ್ಷಮೆ ಕೇಳಬೇಕು: ಬಸವರಾಜ ಬೊಮ್ಮಾಯಿ ಆಗ್ರಹ*
ಬೆಳಗಾವಿ: ಪಾಕಿಸ್ತಾನ ಪರ ಘಷಣೆ ಕೂಗಿರುವ ದೇಶದ್ರೋಹಿಗಳ ಪರ ಹಲವು ಸಚಿವರು ನಿಂತಿರುವುದು ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಪಾಕ್ ಪರ ಘೋಷಣೆ ಕೂಗಿರುವುದು ಸ್ಪಷ್ಟವಾಗಿತ್ತು. ಆ ಸಂದರ್ಭದಲ್ಲಿ ಸಚಿವರು ದೇಶ ದ್ರೋಹಿಗಳ ರಕ್ಷಣೆಗೆ ನಿಂತಿದ್ದರು. ಜವಾಬ್ದಾರಿ ಮರೆತು ಕೆಲ ಸಚಿವರು ದೇಶದ್ರೋಹಿಗಳ ಪರ ನಿಂತಿದ್ದು ದುರ್ದೈವ. ಇವರ ನಡೆ ಆತಂತಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಎಫ್ ಎಸ್ ಎಲ್ ರಿಪೋರ್ಟ್ ಬಂದು ನಾಲ್ಕು ದಿನ ಕಳೆದಿದೆ
ಎರಡು ದಿನಗಳ ಹಿಂದೆ ಎನ್ ಐಎ ಎಫ್ಐಆರ್ ಮಾಡಿಕೊಂಡಿದಕ್ಕೆ ಮೂವರ ಬಂಧನವಾಗಿದೆ. ಮಾಧ್ಯಮಗಳೇ ಇದನ್ನು ಪ್ರಚೋದಿಸುತ್ತಿವೆ ಎಂದು ಸರ್ಕಾರ ದೂರಿತು. ಪತ್ರಕರ್ತರನ್ನು ಗುರಿ ಮಾಡಿಕೊಂಡು ಮಾತನಾಡಿದರು. ಪಾಕ್ ಪರ ಘೋಷಣೆ ಕೂಗಿದವರ ಸಮರ್ಥನೆ ಮಾಡಿಕೊಂಡವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
Comments