ಬೆಳಗಾವಿ- ಕೆಎಂಎಫ್ ಅರ್ಥಾತ್ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಖಾಲಿ ಇರುವ 460 ವಿವಿಧ ಹುದ್ದೆಗಳಿಗೆ ಭರ್ತಿ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಬೆಳಗಾವಿಯ ಮೂಡಲಗಿ ತಾಲೂಕಿನ ನಾಗನೂರು ಹಾಲು ಉತ್ಪಾದಕರ ಸಹಕಾರ ಸಂಘದ ಹಾಲು ಶೀತಲೀಕರಣ ಘಟಕ ಉದ್ಘಾಟಿಸಿದ ತರುವಾಯ ಅವರು ಈ ವಿಷಯ ತಿಳಿಸಿದರು.
460 ವಿವಿಧ ಹುದ್ದೆಗಳಿಗೆ ಭರ್ತಿ ಮಾಡಲಾಗುವುದು. ಈ ಮೂಲಕ ಉತ್ತರ ಕರ್ನಾಟಕದ ಪ್ರತಿಭಾನ್ವಿತ ಯುವಕ-ಯುವತಿಯರಿಗೆ ಪ್ರಾದ್ಯಾನತೆ ಕಲ್ಪಿಸಲಾಗುವುದು ಎಂದರು.
ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇದು ಸಿಹಿ ಸುದ್ಧಿಯಾಗಿದೆ. ಮಾರ್ಚ್ ತಿಂಗಳ ಒಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
Comments